ಪೌರಾಡಳಿತ ಸಚಿವರ ಪ್ರವಾಸ

 ಪೌರಾಡಳಿತ  ಸಚಿವರ  ಪ್ರವಾಸ
Share this post

ಮಂಗಳೂರು ಆಗಸ್ಟ್ 25: ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಡಾ. ನಾರಾಯಣ ಗೌಡ ಅವರು ಆ.26 , 27ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
       ಆಗಸ್ಟ್ 26 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿಗೆ ಆಗಮಿಸಿ, 11.30 ಗಂಟೆಗೆ ಪುತ್ತೂರು ನಗರಸಭೆಯ ನೂತನ ಕಚೇರಿ ಕಟ್ಟಡ ಶಿಲಾನ್ಯಾಸ ನವೀಕೃತ ಪುರಭವನ ಹಾಗೂ ನವೀಕೃತ ಗಾಂಧಿಕಟ್ಟೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು, ಮಧ್ಯಾಹ್ನ 2 ಗಂಟೆಗೆ ಪುತ್ತೂರು ನಗರ ವ್ಯಾಪ್ತಿಯಲ್ಲಿರುವ ನಗರೋತ್ಥಾನ ಮತ್ತು ಇತರೆ ಯೋಜನೆ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸುವರು, ಮಧ್ಯಾಹ್ನ 4.30 ಗಂಟೆಗೆ ಬಂಟ್ವಾಳದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ 6 ಗಂಟೆಗೆ ಮಂಗಳೂರಿನ ಸಕ್ರ್ಯೂಟ್ ಹೌಸ್‍ನಲ್ಲಿ ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳ ಚರ್ಚೆ ನಡೆಸಿ ವಾಸ್ತವ್ಯ ಮಾಡಲಿದ್ದಾರೆ.
     ಆಗಸ್ಟ್ 27 ರಂದು ಬೆಳಿಗ್ಗೆ 10.20ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

Subscribe to our newsletter!

Other related posts

error: Content is protected !!