ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಚಿವ ಶ್ರೀನಿವಾಸ್ ಪೂಜಾರಿ

 ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಚಿವ ಶ್ರೀನಿವಾಸ್ ಪೂಜಾರಿ
Share this post

ಉಡುಪಿ, ಅ 18: ರಾಜ್ಯ ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯರವರು ಮದ್ದಳೆ ಮಾಂತ್ರಿಕ ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಶನಿವಾರ ನಿಧನರಾದ ಗೋಪಾಲ್ ರಾವ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರಿಗೆ 101 ವರ್ಷ ವಯಸ್ಸಾಗಿತ್ತು.

ಯಕ್ಷಗಾನದ ಅತ್ಯಂತ ಹಿರಿಯ ಕಲಾವಿದ್ದರಾಗಿದ್ದ ಹಿರಿಯಡ್ಕ ಗೋಪಾಲ್ ರಾವ್ ಅವರ ನಿಧನ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಠವಾಗಿದೆ, ಮೃತರ ಆತ್ಮಕೆ ಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹೇಳಿದರು.

Subscribe to our newsletter!

Other related posts

error: Content is protected !!