ಉಡುಪಿ ಶ್ರೀಕೃಷ್ಣನಿಗೆ ನೂತನ ಸುವರ್ಣ ಛತ್ರ
ಉಡುಪಿ, ನ 12: ಪರ್ಯಾಯ ಶ್ರೀ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶ್ರೀ ಈಶ ಪ್ರಿಯ ತೀರ್ಥ ಶ್ರೀಪಾದರು ಉಡುಪಿ ಶ್ರೀ ಕೃಷ್ಣನಿಗೆ ನೂತನ ಸುವರ್ಣ ಛತ್ರವನ್ನು ನಿರ್ಮಿಸಲು ಸಂಕಲ್ಪಿಸಿದ್ದಾರೆ.
ಶ್ರೀ ಕೃಷ್ಣ ದೇವರಿಗೆ ಪ್ರತಿ ದಿನವೂ ಅಲಂಕಾರಿಕವಾಗಿ ಸಮರ್ಪಿಸಲಾಗುವ ಛತ್ರವು (ಛತ್ರಿ, ಕೊಡೆ) ಶಿಥಿಲವಾಗಿದೆ
ಸುವರ್ಣ ಛತ್ರ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಶ್ರೀ ಕೃಷ್ಣ ನ ಅನುಗ್ರಹಕ್ಕೆ ಪಾತ್ರರಾಗಲು ಭಕ್ತರಿಗೆ ಸದವಕಾಶ ನೀಡಲಾಗಿದೆ ಎಂದು ಮಠದ ವ್ಯವಸ್ಥಾಪಕ ಗೋವಿಂದರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also read:
- Udupi Mallige and Jaaji today’s price
- Udupi Sri Krishna Alankara
- Daily Panchangam
- Today’s Rubber price at Rubber Society- Ujire
- Kateel Sri Durgaparameshwari today’s Alankara
