ವಿಕಲಚೇತನರ ರಿಯಾಯತಿ ಬಸ್ ಪಾಸ್ – ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ

 ವಿಕಲಚೇತನರ ರಿಯಾಯತಿ ಬಸ್ ಪಾಸ್ – ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ
Share this post

ಮಂಗಳೂರು ಡಿ 07, 2020 :  2021ನೇ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ/ ನವೀಕರಣದ ವಿಕಲಚೇತನರ ರಿಯಾಯತಿ ಬಸ್ ಪಾಸ್‍ಗಾಗಿ ಆನ್‍ಲೈನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.  

ಅರ್ಜಿಯನ್ನು  2021ನೇ ಜನವರಿ 01 ರಿಂದ ಡಿಸೆಂಬರ್ 31 ರವರೆಗೆ ಸಲ್ಲಿಸಬಹುದು ಹಾಗೂ ಅರ್ಜಿಸಲ್ಲಿಸಲು ಆನ್‍ಲೈನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ವಿಕಲಚೇತನ ಅರ್ಜಿದಾರರು ಆನ್‍ಲೈನಲ್ಲಿ  ತಮ್ಮ ವಿವರಗಳನ್ನು ಭರ್ತಿಗೊಳಿಸಿ ಅಗತ್ಯ ದಾಖಲೆಗಳನ್ನು ಜೆ.ಪಿ.ಜೆ ಅಥವಾ ಪಿ.ಡಿ.ಎಫ್ ನಮೂನೆಯಲ್ಲಿ ಆನ್‍ಲೈನಲ್ಲಿ  ಅಡಕಗೊಳಿಸುವುದು.

ಬಸ್ ಪಾಸ್ ನವೀಕರಿಸಿ ಕೊಳ್ಳುವವರು ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪಾಸ್ ಕೌಂಟರ್ ಗಳಲ್ಲಿ ಹಾಗೂ ಹೊಸದಾಗಿ ಪಾಸ್ ಪಡೆಯುವವರು ವಿಭಾಗೀಯ ಕಛೇರಿಯಲ್ಲಿ ಹಣ ಪಾವತಿಸಲು ಅವಕಾಶವಿರುತ್ತದೆ.

ಸೇವಾಸಿಂಧು ಆನ್‍ಲೈನಲ್ಲಿ ಪಾವತಿ ವ್ಯವಸ್ಥೆ ಸದ್ಯದಲ್ಲೆ ಜಾರಿಯಾಗಲಿದ್ದು ವಿವರಗಳನ್ನು ನಂತರ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ Website:- https://serviceonline.gov.in/karnataka/ ದೂರವಾಣಿ ಸಂಖ್ಯೆ: 0824-2458173, 2455999 ಅಥವಾ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!