ದೇಶ ವಿರೋಧಿ ಘೋಷಣೆ ಪ್ರಕರಣ: ಮೂವರ ಬಂಧನ

 ದೇಶ ವಿರೋಧಿ ಘೋಷಣೆ ಪ್ರಕರಣ: ಮೂವರ ಬಂಧನ
Share this post

ಮಂಗಳೂರು, ಡಿಸೆಂಬರ್ 31, 2020: ಡಿಸೆಂಬರ್ 30 ರಂದು ಉಜಿರೆಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಪ್ರಕರಣದ ತನಿಖೆಯ ಆಧಾರದಲ್ಲಿ ಹಾಗೂ ಸಂಗ್ರಹಿಸಲಾಗಿರುವ ಸಾಕ್ಷ್ಯಗಳ ಅಧಾರದಲ್ಲಿ ಪಿಲಿಚಂಡಿ ಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22 ), ದಾವೂದ್ ( 36) ಹಾಗೂ ಇಸಾಕ್ (28) ಎಂಬವರುಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ.

ಪೊಲೀಸರು ನಿನ್ನೆ ವೈರಲ್ ಆಗಿದ್ದ ವಿಡಿಯೋವನ್ನು ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಿದ್ದಾರೆ. ಆ ವೀಡಿಯೋವನ್ನು ಹೊರತುಪಡಿಸಿ ಈ ಘಟಣೆಗೆ ಸಂಬಂಧಿಸಿದ ಮೊಬೈಲ್ ಮೂಲಕ ಚಿತ್ರೀಕರಿಸಲಾದ ಇತರ ಎರಡು ವೀಡಿಯೊಗಳು ಪೊಲೀಸರಿಗೆ ಲಭ್ಯವಾಗಿದ್ದು ಅವುಗಳನ್ನೂ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ.

Subscribe to our newsletter!

Other related posts

error: Content is protected !!