ಪಡಿತರ ಚೀಟಿದಾರರು ವಿವರಗಳನ್ನು ನೀಡಲು ಸೂಚನೆ

 ಪಡಿತರ ಚೀಟಿದಾರರು ವಿವರಗಳನ್ನು ನೀಡಲು ಸೂಚನೆ
Share this post

ಮಂಗಳೂರು, ಜನವರಿ 19, 2021:  ಸರಕಾರದ ಸೂಚನೆಯಂತೆ ಮೊದಲ ಹಂತದಲ್ಲಿ ಇ-ಕೆ.ವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆ.ವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಮರು ಪ್ರಾರಂಭಿಸಲು ಆದೇಶವಾಗಿರುತ್ತದೆ.

ಪಡಿತರ ಚೀಟಿದಾರರು ತಮ್ಮ ಕುಟುಂಬದ  ಎಲ್ಲಾ ಸದಸ್ಯರ  ಇ-ಕೆ.ವೈಸಿ ನೀಡಬೇಕಾಗಿದ್ದು, ಪಡಿತರ  ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ. ವಿವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕಾಗಿರುತ್ತದೆ.

ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಚಾಲ್ತಿ ಇರುವ  ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆ.ವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ  ಪ್ರಮಾಣ  ಪತ್ರ ಮುಂತಾದ ದಾಖಲೆಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆ.ವೈಸಿ ಮಾಡಿಸಿಕೊಳ್ಳಬೇಕು.

2020ರ ಫೆಬ್ರವರಿ ನಂತರ ವಿತರಿಸಿರುವ ಹೊಸ ಹಾಗೂ ಜಿ.ಎಸ್.ಸಿ(ತಿದ್ದುಪಡಿ) ಮಾಡಲಾದ ಪಡಿತರ ಚೀಟಿಗಳನ್ನು ಬಿಟ್ಟು ಮೊದಲ ಹಂತದಲ್ಲಿ ಇ-ಕೆ.ವೈಸಿ ಮಾಡದಿರುವ ಅಂತ್ಯೋದಯ ಹಾಗೂ ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆ.ವೈಸಿ ಮಾಡಲೇ ಬೇಕಾಗಿರುತ್ತದೆ.

ಇ-ಕೆ.ವೈಸಿ  ನೀಡಲು ಯಾವುದೇ ಶುಲ್ಕವಿರುವುದಿಲ್ಲ. ಇದನ್ನು ಉಚಿತವಾಗಿ ಮಾಡಲು ಕ್ರಮ ವಹಿಸಲಾಗಿದ್ದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.  

ಹೆಚ್ಚಿನ ಮಾಹಿತಿಗಾಗಿ ಅಥವಾ ಇ-ಕೆ.ವೈಸಿ  ಸಂಗ್ರಹಣೆಗೆ ಯಾರಾದರೂ ಹಣ ಕೇಳಿದಲ್ಲಿ, ಏನಾದರೂ ದೂರುಗಳಿದ್ದರೆ  ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರು ಮತ್ತು ಸಹಾಯಕ ನಿರ್ದೇಶಕರು ಅನೌಪಚಾರಿಕ ಪಡಿತರ ಪ್ರದೇಶ ಮಂಗಳೂರು ಇವರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.  

Subscribe to our newsletter!

Other related posts

error: Content is protected !!