ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

 ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ
Share this post

ಮಂಗಳೂರು, ಜನವರಿ, 21 2021: ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಗುರುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ  ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಜನವರಿ ಅಂತ್ಯದೊಳಗೆ ಹಾಗೂ ಪ್ರಸ್ತುತ ಅನುಮೋದನೆಗೆ ಸಲ್ಲಿಸಿರುವ 80 ಕಾಮಗಾರಿಗಳನ್ನುಮಾರ್ಚ್ ಎರಡನೇ ವಾರದೊಳಗಾಗಿ ಪೂರ್ಣಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿಒಟ್ಟಾರೆ 94 ಕಾಮಗಾರಿಗಳನ್ನು 8.07 ಕೋಟಿರೂ.ಗಳ ಮೊತ್ತದಲ್ಲಿ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಜಿಲ್ಲಾ ಪಂಚಾಯತ್‍ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಮಂಡಳಿ ಸದಸ್ಯರಾದ ರಾಮ ಅಮಿನ್ ಪಚ್ಚಾಡಿ ಹಾಗೂ ಮಂಡಳಿಯ ಕಾರ್ಯದರ್ಶಿ ಕೆ.ಎಸ್. ಮಣಿ,  ಲೋಕೋಪಯೋಗಿ ಇಲಾಖೆ, ಪಂಚಾಯತ್‍ರಾಜ್‍ ಇಂಜಿನಿಯರಿಂಗ್ ವಿಭಾಗ, ಕರ್ನಾಟಕ ರೂರಲ್‍ ಇನ್ಫಾಸ್ಟ್ರಕ್ಚರ್ ಡೆವಲಪ್‍ಮೆಂಟ್ ಲಿಮಿಟೆಡ್, ಮಹಾನಗರ ಪಾಲಿಕೆ ಅಭಿಯಂತರುಗಳು  ಮಂಗಳೂರು ಹಾಗೂ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ  ಹಾಗೂ ಜಿಲ್ಲಾ ಮಟ್ಟ ಅನುಷ್ಠಾನಾಧಿಕಾರಿಗಳು  ಉಪಸ್ಥಿತರಿದ್ದರು. 

Subscribe to our newsletter!

Other related posts

error: Content is protected !!