ಧರ್ಮಸ್ಥಳ: ಭಗವಾನ್ ಬಾಹುಬಲಿ ಮೂರ್ತಿ ಪ್ರತಿಷ್ಠಾ ಮಹೋತ್ಸವ

 ಧರ್ಮಸ್ಥಳ: ಭಗವಾನ್ ಬಾಹುಬಲಿ ಮೂರ್ತಿ ಪ್ರತಿಷ್ಠಾ ಮಹೋತ್ಸವ
Share this post
Dharmasthala Bahubali Pratista Mahotsav

ಧರ್ಮಸ್ಥಳ, ಫೆ 02, 2021: ಧರ್ಮಸ್ಥಳದ ಭಗವಾನ್ ಶ್ರೀ ಬಾಹುಬಲಿ ಮೂರ್ತಿ ಪ್ರತಿಷ್ಠಾ ಮಹೋತ್ಸವ ಹಾಗೂ ಮೂವತ್ತೊಂಭತ್ತನೆ ವರ್ಧಂತ್ಯುತ್ಸವದ ಅಂಗವಾಗಿ ಮಂಗಳವಾರ ತೋರಣ ಮುಹೂರ್ತ, ವಿಮಾನ ಶುದ್ಧಿ, ನಾಂದಿಮಂಗಲ ಮೊದಲಾದ ಧಾರ್ಮಿಕ
ವಿಧಿ-ವಿಧಾನಗಳು ನಡೆದವು.

ಶ್ರೀ ನಿರ್ವಾಣ ಸಾಗರ ಕ್ಷುಲ್ಲಕ ಮಹಾರಾಜ್, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ನಾಳೆ ಪಾದಾಭಿಷೇಕ: ಬುಧವಾರ ಬೆಳಿಗ್ಯೆ ಗಂಟೆ 8.30ರಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯುತ್ತದೆ.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕರು ಮಂಗಲ ಪ್ರವಚನ ನೀಡುವರು.

Subscribe to our newsletter!

Other related posts

error: Content is protected !!