ಧರ್ಮಸ್ಥಳ ಭಗವಾನ್ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

 ಧರ್ಮಸ್ಥಳ ಭಗವಾನ್ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ
Share this post
Padabhishekha to Lord Bahubali in Dharmasthala
ಧರ್ಮಸ್ಥಳ ಬಾಹುಬಲಿ ಸ್ವಾಮಿ ಮೂರ್ತಿಗೆ ಬುಧವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಪಾದಾಭಿಷೇಕ ಅರ್ಪಿಸಿದರು.

ಧರ್ಮಸ್ಥಳ ಫೆ 03, 3021: ಧರ್ಮಸ್ಥಳ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಬುಧವಾರ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು.

ಬೀಡಿನಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಹಾಗೂ ಗಂಧ, ಚಂದನ, ಕಲ್ಕಚೂರ್ಣ, ಶ್ರೀಗಂಧ, ಇಕ್ಷುರಸ ಮೊದಲಾದ ಮಂಗಳದ್ರವ್ಯಗಳಿಂದ ಪಾದಾಭಿಷೇಕ ನಡೆಸಲಾಯಿತು.

Padabhishekha to Lord Bahubali in Dharmasthala

ಪುಷ್ಪವೃಷ್ಟಿ ಬಳಿಕ ಮಹಾಮಂಗಳಾರತಿ ಹಾಗೂ ಶಾಂತಿಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಡಾ. ಬಿ. ಯಶೋವರ್ಮ, ಸೋನಿಯಾವರ್ಮ, ಪೂರಣ್‍ವರ್ಮ, ಭರತ್‍ರಾಜ್ ಮೊದಲಾದವರು ಪಾದಾಭಿಷೇಕ ಮಾಡಿದರು.

Padabhishekha to Lord Bahubali in Dharmasthala

ಪೂಜ್ಯ ನಿರ್ವಾಣ ಸಾಗರ ಕ್ಷುಲ್ಲಕ ಮಹಾರಾಜರು ಹಾಗೂ ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!