ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಣೆ

 ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಣೆ
Share this post

ಮಂಗಳೂರು, ಜನವರಿ 09, 2021: ಸರ್ಕಾರದ ಸೂಚನೆಯಂತೆ ಮೊದಲ ಹಂತದಲ್ಲಿ
ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತಿ ತಿಂಗಳ 1 ರಿಂದ 10 ತಾರೀಕಿನವರೆಗೆ ನೀಡಬಹುದಾಗಿದೆ.

ಪಡಿತರ ಚೀಟಿದಾರರು ತಮ್ಮ ಕುಟುಂಬದ  ಎಲ್ಲಾ ಸದಸ್ಯರ  ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ.ವಿವರ, ಮೊಬೈಲ್ ಸಂಖ್ಯೆಗಳನ್ನು ನೀಡಬೇಕು.

ಜಿಲ್ಲೆಯಲ್ಲಿ  ಚಾಲ್ತಿಯಲ್ಲಿರುವ  ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ (ಇದ್ದಲ್ಲಿ), ಆದಾಯ  ಪ್ರಮಾಣ ಪತ್ರ ಮುಂತಾದ ದಾಖಲೆಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಲು ತಿಳಿಸಿದೆ.

2020ರ ಫೆಬ್ರವರಿ ನಂತರ ವಿತರಿಸಿರುವ ಹೊಸ ಹಾಗೂ ಜಿ.ಎಸ್.ಸಿ(ತಿದ್ದುಪಡಿ) ಮಾಡಲಾದ ಪಡಿತರ ಚೀಟಿಗಳನ್ನು ಬಿಟ್ಟು ಮೊದಲ ಹಂತದಲ್ಲಿ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಹಾಗೂ ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಮಾಡಲೇ ಬೇಕಾಗಿರುತ್ತದೆ.

ಇ-ಕೆವೈಸಿ  ನೀಡಲು ಯಾವುದೇ ಶುಲ್ಕವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರು ಮತ್ತು ಸಹಾಯಕ ನಿರ್ದೇಶಕರು ಅನೌಪಚಾರಿಕ ಪಡಿತರ ಪ್ರದೇಶ ಮಂಗಳೂರು ಇವರ ಕಛೇರಿಯನ್ನು ಸಂಪರ್ಕಿಸಲು ದ.ಕ ಜಿಲ್ಲಾಧಿಕಾರಿಗಳು ಕಛೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Subscribe to our newsletter!

Other related posts

error: Content is protected !!