ಗ್ರಾಮ ವಾಸ್ತವ್ಯದಲ್ಲಿ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಮನವಿ
![ಗ್ರಾಮ ವಾಸ್ತವ್ಯದಲ್ಲಿ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಮನವಿ](https://thecanarapost.com/wp-content/uploads/2021/02/WhatsApp-Image-2021-02-18-at-1.08.58-PM.jpeg)
ಕಾರವಾರ, ಫೆಬ್ರವರಿ 18, 2021: ತಾಲೂಕಿನ ಬಾಡ, ಹೋಬಳಿಯ ಗುಡ್ಡಳ್ಳಿಯಲ್ಲಿ ಫೆ. 20 ರಂದು ಕಂದಾಯ ಹಾಗೂ ಇತರೇ ಇಲಾಖೆಯ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಎರ್ಪಡಿಸಿದ್ದು ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರೆತೆಗಳಿಗೆ ಸ್ಪಂದಿಸಲಿದ್ದಾರೆ.
ಆದ್ದರಿಂದ ಸಾರ್ವಜನಿಕರು ತಮ್ಮಸಮಸ್ಯೆಗಳ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಕಾರವಾರ ತಹಶೀಲ್ದಾರ್ ಆರ್.ವಿ. ಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.