ಡಾ. ಬಾಬು ಜಗಜೀವನ ರಾಂ, ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ: ಅರ್ಜಿ ಆಹ್ವಾನ

 ಡಾ. ಬಾಬು ಜಗಜೀವನ ರಾಂ, ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ: ಅರ್ಜಿ ಆಹ್ವಾನ
Share this post

ಕಾರವಾರ, ಮಾರ್ಚ್ 16, 2021: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಜನಾಂಗದವರ ಏಳಿಗೆ, ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ದೌರ್ಜನ್ಯ ತಡೆಯುವ ಚಟುವಟಿಕೆಗಳಲ್ಲಿ ಸ್ವಯಂ ಪ್ರೇರಣೆಯಿಂದ ನಿರಂತರವಾಗಿ ತೊಡಗಿಸಿಕೊಂಡು ಶ್ರಮಿಸುತ್ತಿರುವ ವ್ಯಕ್ತಿಗಳಿಗೆ 2021-22ನೇ ಸಾಲಿನ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಗಾಗಿ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಮಾರ್ಚ್ 23 ರೊಳಗೆ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226514, 9480843047ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್. ಪುರುಷೋತ್ತಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ.ಕ: ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಗಳೂರು ತಾಲೂಕಿನ ಕಚೇರಿ ದೂ. ಸಂ. 0824-2441269, ಬಂಟ್ವಾಳ ತಾಲೂಕಿನ ಕಚೇರಿ ದೂ. ಸಂ. 08255-230968, ಪುತ್ತೂರು ತಾಲೂಕಿನ ಕಚೇರಿ ದೂ. ಸಂ. 08251-298803, ಬೆಳ್ತಂಗಡಿ ತಾಲೂಕಿನ ಕಚೇರಿ ದೂ. ಸಂ. 0825-6233528, ಸುಳ್ಯ ತಾಲೂಕಿನ ಕಚೇರಿ ದೂ. ಸಂ. 08257-233527 ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!