ಉಡುಪಿ, ದ.ಕ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

 ಉಡುಪಿ, ದ.ಕ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ
Share this post

ಮಂಗಳೂರು, ಮಾರ್ಚ್ 18, 2021: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಪ್ರಸ್ತುತ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶೀಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರಸ್ತೆ, ಬಿಜೈ-ಕಾಪಿಕಾಡ್, ಮಂಗಳೂರು ಕಚೇರಿಯ ದೂ. ಸಂಖ್ಯೆ: 0824-2225078 ಹಾಗೂ www.ssp.postmatric.karnataka.gov.in ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ:

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.ssp.postmatric.karnataka.gov.in ಹಾಗೂ ದೂರವಾಣಿ ಸಂಖ್ಯೆ: 0820-2573881 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!