ಮದ್ಯದಂಗಡಿಗಳನ್ನು ಮುಚ್ಚಲು – ಆದೇಶ

 ಮದ್ಯದಂಗಡಿಗಳನ್ನು ಮುಚ್ಚಲು – ಆದೇಶ
Share this post

ಮಂಗಳೂರು, ಮಾರ್ಚ್ 20, 2021: ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ನಡೆಯುವ ಹಿಂದೂ ಐಕ್ಯತಾ ಸಮಾವೇಶ ಮತ್ತು ಶೋಭಾಯಾತ್ರೆಯು ಮಾರ್ಚ್ 21 ರಂದು ಪುತ್ತೂರು ಶ್ರೀ ಮಹಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿದೆ.

ಸದರಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡಲು ಸಾರ್ವಜನಿಕರ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಪುತ್ತೂರು ನಗರ, ಗ್ರಾಮಾಂತರ, ಉಪ್ಪಿನಂಗಡಿ ಠಾಣಾ ಸರಹದ್ದಿನ ಎಲ್ಲಾ ಬಾರ್, ವೈನ್ ಶಾಪ್, ಸರಕಾರಿ ಮದ್ಯ ಮಳಿಗೆಗಳನ್ನು ಮಾರ್ಚ್ 21 ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ  ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿ ಅಧಿಸೂಚನೆ ಹೊರಡಿಸಿದ್ದಾರೆ.

Subscribe to our newsletter!

Other related posts

error: Content is protected !!