ಕೋವಿಡ್ ಸುರಕ್ಷಾನಿಯಮ ಉಲ್ಲಂಘನೆ ದಂಡ ಪ್ರಕರಣ ಹೆಚ್ಚು ಮಾಡಿ: ಜಿಲ್ಲಾಧಿಕಾರಿ

 ಕೋವಿಡ್ ಸುರಕ್ಷಾನಿಯಮ ಉಲ್ಲಂಘನೆ  ದಂಡ ಪ್ರಕರಣ ಹೆಚ್ಚು ಮಾಡಿ: ಜಿಲ್ಲಾಧಿಕಾರಿ
Share this post

ಉಡುಪಿ, ಮಾರ್ಚ್ 23, 201: ಜಿಲ್ಲೆಯಲ್ಲಿಕೋವಿಡ್ ‌ಎರಡನೇ ಅಲೆಯು ಪ್ರಾರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಪಾಲನೆ ಮಾಡದೇ ಇರುವುದು ಕಂಡು ಬರುತ್ತಿದ್ದು ,ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.

ಅವರು ಮಂಗಳವಾರ, ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು, ಉಡುಪಿ ನಗರಸಭೆಯ ಪೌರಾಯುಕ್ತರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಝೂಮ್ ಮೀಟಿಂಗ್ ಮೂಲಕ ಸಭೆ ನಡೆಸಿದರು.

ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುವಂತೆ, ವಿವಿಧ ಮಾಲ್‌ಗಳು,  ಹಾಲ್‌ಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ನಿಗದಿಪಡಿಸಿರುವ ಸಂಖ್ಯೆಗಿಂತ ಹೆಚ್ಚಿನ ಸಾರ್ವಜನಿಕರು ಸೇರಿದ್ದರೆ ಸಂಬಂಧಪಟ್ಟವರ ವಿರುದ್ಧ ಸುತ್ತೋಲೆಯಂತೆ ಸೂಕ್ತ ಕ್ರಮ ಕೈಗೊಳ್ಳಿ ಹಾಗೂ ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ದಂಡ ವಿಧಿಸುವ ಅಧಿಕಾರವನ್ನು ವಿವಿಧ ಅಧಿಕಾರಿಗಳಿಗೆ ಈಗಾಗಲೇ ಪ್ರತ್ಯಾಯೋಜಿಸಿದ್ದು, ಅದರಂತೆ ಕ್ರಮ ಕೈಗೊಳ್ಳಿ, ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕೋವಿಡ್‌ ಎರಡನೇ ಅಲೆಯ ನಿಯಂತ್ರಣಕ್ಕೆ ಕೋವಿಡ್ ಸುರಕ್ಷಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಅತ್ಯಗತ್ಯವಾಗಿದ್ದು, ಸಾರ್ವಜನಿಕರು ಎಲ್ಲಾ ಸುರಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸುವುದರ ಮೂಲಕ  ಜಿಲ್ಲೆಯನ್ನುಕೋವಿಡ್ 2 ನೇ ಅಲೆಯಿಂದ ರಕ್ಷಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!