ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

 ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
Share this post

ಮಂಗಳೂರು, ಮಾರ್ಚ್ 24, 2021: ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ವಿಶೇಷ ಕೇಂದ್ರಿಯ ನೆರವಿನಡಿ (ಎಸ್.ಸಿ.ಎ ಮತ್ತು ಎಸ್.ಸಿ.ಎಸ್.ಪಿ) ಜಿಲ್ಲೆಯ ಪರಿಶಿಷ್ಟ ಜಾತಿ ಫಲಾಪೇಕ್ಷಿಗಳಿಗೆ ಕೌಶಲ್ಯ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿ.ಹೆಚ್.ಎಸ್ ರಸ್ತೆ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಮಂಗಳೂರು ಕಚೇರಿ ದೂ. ಸಂಖ್ಯೆ: 0824-2420114 ಹಾಗೂ [email protected] ನ್ನು ಸಂಪರ್ಕಿಸಬಹುದು ಎಂದು ಡಾ. ಬಿ. ಆರ್. ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!