ಶಿರ್ವ ಸಂತ ಮೇರಿ ಕಾಲೇಜಿನ ಸತ್ಯ ಸುಬ್ರಹ್ಮಣ್ಯಗೆ ನಾಲ್ಕನೇ ರ‍್ಯಾಂಕ್

 ಶಿರ್ವ ಸಂತ ಮೇರಿ ಕಾಲೇಜಿನ ಸತ್ಯ ಸುಬ್ರಹ್ಮಣ್ಯಗೆ ನಾಲ್ಕನೇ ರ‍್ಯಾಂಕ್
Share this post

ಉಡುಪಿ, ಮಾರ್ಚ್ 25, 2021: ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆ, ಶಿರ್ವ ಸಂತ ಮೇರಿ ಕಾಲೇಜಿನ ವಿದ್ಯಾರ್ಥಿ ಸತ್ಯ ಸುಬ್ರಹ್ಮಣ್ಯ ವಿ.ಎಸ್. ರವರು ಮಂಗಳೂರು ವಿಶ್ವವಿದ್ಯಾನಿಲಯ 2020 ರ ಸೆಪ್ಟೆಂಬರ್ ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಗಣಕ ವಿಜ್ಞಾನ ವಿಭಾಗ (ಬಿ.ಸಿ.ಎ) ದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ.

ಕಾಸರಗೋಡಿನ ಶ್ರೀ. ವೆಂಕಟೇಶ್ವರ ಭಟ್ ಮತ್ತು ಶ್ರೀಮತಿ ಗೌರಿ ಅವರ ಪುತ್ರರಾದ ಅವರು ಶೇಕಡಾ 95.72% ಅಂಕಗಳೊಂದಿಗೆ ನಾಲ್ಕನೇ ರ್ಯಾಂಕ್ ಗಳಿಸಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Subscribe to our newsletter!

Other related posts

error: Content is protected !!