ಯುವ ಕಾರ್ಯಕರ್ತರ ನೇಮಕ: ಏಪ್ರಿಲ್ 19 ರಂದು ನೇರ ಸಂದರ್ಶನ

 ಯುವ ಕಾರ್ಯಕರ್ತರ ನೇಮಕ: ಏಪ್ರಿಲ್ 19 ರಂದು ನೇರ ಸಂದರ್ಶನ
Share this post

ಉಡುಪಿ, ಏಪ್ರಿಲ್ 18, 2021: ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿಯ
ನೆಹರು ಯುವ ಕೇಂದ್ರವು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಾಷ್ಟೀಯ ಯುವ ಕಾರ್ಯಕರ್ತರ ಯೋಜನೆಯಡಿ ಯುವ
ಕಾರ್ಯಕರ್ತರನ್ನು ಪ್ರತಿ ತಾಲೂಕಿಗೆ ಇಬ್ಬರಂತೆ (ಉಡುಪಿಯ 7 ತಾಲೂಕುಗಳಿಗೆ) ಹಾಗೂ ಕಛೇರಿಯ ಕೆಲಸಕ್ಕೆ ಇಬ್ಬರು
ಒಟ್ಟು 16 ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುವ ಸಲುವಾಗಿ, ಏಪ್ರಿಲ್ 19 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ
ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ನೇರ ಸಂದರ್ಶನವನ್ನು ನಿಗದಿಪಡಿಸಲಾಗಿದೆ.

ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಹತೆ ಹೊಂದಿರುವ 29 ವರ್ಷದೊಳಗಿನ ಯುವಕ,
ಯುವತಿಯರು ನೇಮಕಾತಿಗೆ ಅರ್ಹರಿದ್ದು, ನೇಮಕಗೊಂಡ ಅಭ್ಯರ್ಥಿಗಳಿಗೆ ರೂ.5,000 ಮಾಸಿಕ ಗೌರವಧನವನ್ನು
ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಸೈಜ್ ಪೋಟೋ ಹಾಗೂ ಇತರ ದಾಖಲೆಯ
ಮೂಲ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0820- 2574992
ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!