ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್ ಪಾಸ್ ವಿತರಣೆ ಕಾರ್ಯಕ್ರಮ ಮುಂದೂಡಿಕೆ

 ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್ ಪಾಸ್ ವಿತರಣೆ ಕಾರ್ಯಕ್ರಮ ಮುಂದೂಡಿಕೆ
Share this post

ಮಂಗಳೂರು, ಎಪ್ರಿಲ್ 23, 2021: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಅನುಕೂಲವಾಗುವಂತೆ ಕೊಕ್ಕಡ, ಕೊೈಲ, ಕಾಣಿಯೂರು, ಬೆಳ್ಳಾರೆ, ವಿಟ್ಲದಲ್ಲಿ ಎಪ್ರಿಲ್ 26 ರಿಂದ 30 ರ ವರೆಗೆ ಉಚಿತ ಬಸ್ ಪಾಸ್‍ಗಳನ್ನು ವಿತರಿಸಲು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ದೇಶದಾದ್ಯಂತ ಕೋವಿಡ್ 19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದರಿ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಪಾಸ್ ನೀಡುವ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಪುತ್ತೂರು ವಿಭಾಗ ಕ.ರಾ.ರ.ಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!