ಬೆಳಿಗ್ಗೆ 6 ರಿಂದ 10 ರ ವರೆಗೆ ಬೇಕರಿ ತೆರೆಯಲು ಮನವಿ: ರಘುಪತಿ ಭಟ್

 ಬೆಳಿಗ್ಗೆ 6 ರಿಂದ 10 ರ ವರೆಗೆ ಬೇಕರಿ ತೆರೆಯಲು ಮನವಿ: ರಘುಪತಿ ಭಟ್
Share this post

ಉಡುಪಿ, ಮೇ 24, 2021: ರೋಗಿಗಳಿಗೆ ಉಪಯೋಗವಿರುವ ಕೆಲವೊಂದು ಬೇಕರಿ ಉತ್ಪನ್ನಗಳ ಅವಶ್ಯಕತೆ ಇದ್ದುದರಿಂದ ಆಹಾರೋತ್ಪಾದನೆ ಅಡಿಯಲ್ಲಿ ಬೇಕರಿ ಉತ್ಪನ್ನಗಳನ್ನು ಉತ್ಪಾದಿಸಲು ಅನುಮತಿ ನೀಡಿ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6.00 ರಿಂದ 10.00 ರ ವರೆಗೆ ಬೇಕರಿಗಳನ್ನು ತೆರೆಯಲು ಅನುಮತಿ ನೀಡುವಂತೆ ಶಾಸಕ ರಘುಪತಿ ಭಟ್ ಬೆಂಗಳೂರಿನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಭೇಟಿಯಾಗಿ ಮನವಿ ಮಾಡಿ ಇದರ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿದರು

ಶಾಸಕರ ಮನವಿಯನ್ನು ಪರಿಗಣಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಕೋವಿಡ್ – 19 ಮಾರ್ಗಸೂಚಿಗಳಲ್ಲಿ ಸೇರಿಸಿರುವ ಅಗತ್ಯವಸ್ತುಗಳ ಅಡಿಯಲ್ಲಿ ಬೇಕರಿ ಉತ್ಪನ್ನಗಳು ಬರುವುದರಿಂದ ಬೆಳಿಗ್ಗೆ 6.00 ರಿಂದ 10.00 ರ ವರೆಗೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿ ಬೇಕರಿಗಳನ್ನು ತೆರೆಯಲು ಅವಕಾಶ ಕಲ್ಪಿಸಿ ಮೌಖಿಕ ಆದೇಶ ನೀಡಿ ಉಡುಪಿ ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.

ಶಾಸಕ ರಘುಪತಿ ಭಟ್ ಬೇಡಿಕೆಗೆ ಸ್ಪಂದಿಸಿದ ಸರ್ಕಾರ

ಸರ್ಕಾರದ ಮಾನ್ಯ ಮುಖ್ಯ ಕಾರ್ಯದರ್ಶಿಗಳು ತಿಳಿಸಿದಂತೆ , ಜಿಲ್ಲೆಯಲ್ಲಿ ನಾಳೆಯಿಂದ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಬೇಕರಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ

Subscribe to our newsletter!

Other related posts

error: Content is protected !!