ಭಾರತೀಯ ಜೈನ ಸಂಘಟನೆ ವತಿಯಿಂದ ಒಂದು ಸಾವಿರಕ್ಕೂ ಮಿಕ್ಕಿ ಆಮ್ಲಜನಕ ಸಾಂದ್ರಕಗಳ ಲೋಕಾರ್ಪಣೆ

 ಭಾರತೀಯ ಜೈನ ಸಂಘಟನೆ ವತಿಯಿಂದ ಒಂದು ಸಾವಿರಕ್ಕೂ ಮಿಕ್ಕಿ ಆಮ್ಲಜನಕ ಸಾಂದ್ರಕಗಳ ಲೋಕಾರ್ಪಣೆ
Share this post

ರಾಜ್ಯದ ಪರವಾಗಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸನ್ಮಾನ

ಧರ್ಮಸ್ಥಳ, ಜೂನ್ 07, 2021: ಭಾರತೀಯ ಜೈನ ಸಂಘಟನೆ (ಬಿಜೆಎಸ್) ಆಶ್ರಯದಲ್ಲಿ 61 ಕೇಂದ್ರಗಳಲ್ಲಿ ಒಂದು ಸಾವಿರಕ್ಕೂ ಮಿಕ್ಕಿ ಆಮ್ಲಜನಕ ಸಾಂದ್ರಕಗಳನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು.

“ಅಹಿಂಸೆಯೇ ಜೈನ ಧರ್ಮದ ಶ್ರೇಷ್ಠ ತತ್ವವಾಗಿದ್ದು ಜೈನರ ಸಮಾಜ ಸೇವಾ ಕಳಕಳಿ ಶ್ಲಾಘನೀಯವಾಗಿದೆ. ಕೊರೊನಾ ನಿರ್ಮೂಲನೆಗೆ ಭಾರತೀಯ ಜೈನ ಸಂಘಟನೆಯ ಅಮೂಲ್ಯ ಮಾನವೀಯ ಸೇವೆ ಸ್ತುತ್ಯಾರ್ಹವಾಗಿದೆ,” ಎಂದು ಹೇಳಿದರು.

ಧರ್ಮಾಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಶಾಂತಿಲಾಲ್ ಮುತ್ತಾರ ನೇತೃತ್ವದಲ್ಲಿ ಭಾರತೀಯ ಜೈನ ಸಂಘಟನೆಯ ಸೇವೆ ದೇಶಕ್ಕೆ ಮಾದರಿಯಾಗಿದೆ. ಪ್ರತಿ ರಾಜ್ಯದಲ್ಲಿಯೂ ಇಂತಹ ಸೇವಾ ಘಟಕಗಳಿರಬೇಕು ಎಂದು ಹೇಳಿದರು.

ದೇಶದಲ್ಲಿ ನೆರೆ-ಬರಗಾಲ ಸಂದರ್ಭದಲ್ಲಿ ಬಿಜೆಎಸ್‍ನ ಸೇವೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.

ಕೊರೊನಾದಿಂದ ಜನರು ಭಯಭೀತರಾಗದೆ, ಬೇಜವಾಬ್ದಾರಿಯಿಂದ ವರ್ತಿಸದೆ, ಮೂಡನಂಬಿಕೆಗೆ ಬಲಿಯಾಗದೆ, ರೋಗದ ಲಕ್ಷಣ ಕಂಡು ಬಂದ ತಕ್ಷಣ ಆಸ್ಪತ್ರೆಗೆ ದಾಖಲಾಗಬೇಕು. ದೇಶದೆಲ್ಲೆಡೆ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ಆದಷ್ಟು ಬೇಗ ಕೊರೊನಾ ಮುಕ್ತ ರಾಜ್ಯ ಹಾಗೂ ಕೊರೊನಾ ಮುಕ್ತ ದೇಶವಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು.

ರಾಜ್ಯದ ಪರವಾಗಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಮುಖ್ಯಮಂತ್ರಿಯವರು ಸನ್ಮಾನಿಸಿದರು.

ಣಮೋಕಾರ ಮಂತ್ರ ಪಠಣದ ಬಳಿಕ ಬಿಜೆಎಸ್ ನ ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರಜಿ ಲಂಕರ್ ಸ್ವಾಗತಿಸಿದರು. ಬಿಜೆಎಸ್ ನ ಸ್ಥಾಪಕ ಶಾಂತಿಲಾಲ್ ಮುತ್ತ ಸಂಘಟನೆಯ ಸೇವಾ ಕಾರ್ಯಗಳ ಸಮಗ್ರ ಮಾಹಿತಿ ನೀಡಿದರು.

ಭಾರತೀಯ ಜೈನ ಸಂಘಟನೆಯ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಮಹಾವೀರ ಚಂದ್ ಜಿ ಪರೆಕ್ ಧನ್ಯವಾದ ಸಸಲ್ಲಿಸಿದರು.

ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್, ಬಿಜೆಎಸ್ ನ ಓಂಪ್ರಕಾಶ್ ಲುನಾವತ್ ಮತ್ತು ಗೌತಮ್‍ಜಿ ಬಫ್ನಾ ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!