ಉಡುಪಿ: ಜೂನ್ 8 ರಂದು ಕೋವಿಡ್ ಲಸಿಕೆ ವಿತರಣೆ

 ಉಡುಪಿ: ಜೂನ್ 8 ರಂದು ಕೋವಿಡ್ ಲಸಿಕೆ ವಿತರಣೆ
Share this post

ಉಡುಪಿ, ಜೂನ್ 07, 2021: ಜಿಲ್ಲೆಯಲ್ಲಿ ಜೂನ್ 8 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ
ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಅಜ್ಜರಕಾಡು ಜಿಲ್ಲಾಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 200 ಡೋಸ್,
ಮಣಿಪಾಲದ ನಗರ ಪ್ರಾಥಮಿಕಆರೋಗ್ಯಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) 100 ಡೋಸ್, ಉಡುಪಿಯ ನಗರ
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಸರಕಾರಿ ಪ್ರಾಥಮಿಕ ಶಾಲೆ ಆದಿ ಉಡುಪಿ) 100 ಡೋಸ್ ಹಾಗೂ ಕುಕ್ಕಿಕಟ್ಟೆಯ ಎಫ್.ಪಿ.ಎ.ಐ
ನಲ್ಲಿ (ಇಂದಿರಾ ನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾ ನಗರ) 50 ಪ್ರಥಮ ಡೋಸ್ ಕೋವಿಶೀಲ್ಡ್
ಲಸಿಕೆಯನ್ನು ನೀಡಲಾಗುವುದು.

ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು ಹಾಗೂ ದುರ್ಬಲ ಗುಂಪಿನ
ಫಲಾನುಭವಿಗಳಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಳೆ
ಕಟ್ಟಡದಲ್ಲಿ (ಅಲಂಕಾರ್‌ ಥಿಯೇಟರ್ ಹತ್ತಿರ) 200 ಡೋಸ್ ಹಾಗೂ ಕುಕ್ಕಿಕಟ್ಟೆಯಎಫ್.ಪಿ.ಎ.ಐ ನಲ್ಲಿ
(ಇಂದಿರಾ ನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 50 ಡೋಸ್ ಲಸಿಕೆ ನೀಡಲಾಗುವುದು.

45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ 2 ನೇ ಡೋಸ್
ಕೋವಿಶೀಲ್ಡ್ ಲಸಿಕೆಯನ್ನು ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) 100
ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ 100 ಡೋಸ್‌, 45 ವರ್ಷ
ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಕೋವ್ಯಾಕ್ಸಿನ್ 2 ನೇ
ಡೋಸ್ ಲಸಿಕೆಯನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ200 ಡೋಸ್‌ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು
ಹಾಗೂ ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಕೇಂದ್ರ ಸರಕಾರ ಗುರುತಿಸಿರುವ
ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ, 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್
2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ
ಲಭ್ಯತೆಯನ್ನು ಖಚಿತ ಪಡಿಸಿಕೊಂಡು ಜೂನ್ 8 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು.

ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು
ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ
ಪಡೆಯಲು ಅರ್ಹರಿರುತ್ತಾರೆ.

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್‌ ಪ್ರಥಮ ಡೋಸ್ ಲಭ್ಯವಿರುವುದಿಲ್ಲ ಎಂದು ಜಿಲ್ಲಾಆರೋಗ್ಯ ಮತ್ತು ಕುಟುಂಬ
ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!