ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ

 ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ
Share this post

ಉಡುಪಿ ಜೂನ್ 16, 2021: ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಒಲಂಪಿಕ್ಸ್ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು (ಮೊ.ನಂ; 8277734612) ಅವರನ್ನು ಜಿಲ್ಲಾಧಿಕಾರಿ ನೇಮಿಸಿದ್ದಾರೆ.

ಈಗಾಗಲೇ ಮೊದಲನೇ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್‌ಪೋರ್ಟ್ ನಂಬರನ್ನು ಬಳಸದೇ ಲಸಿಕೆ ಪಡೆದಿದ್ದರೆ ಅಂತಹ ಫಲಾನುಭವಿಗಳಿಗೆ ಕೋವಿಶೀಲ್ಡ್ನ ಎರಡನೇ ಡೋಸ್ ಲಸಿಕಾಕರಣಕ್ಕಾಗಿ ಅನುಬಂಧ-5 ರಲ್ಲಿ ಲಸಿಕಾ ಪ್ರಮಾಣ ಪತ್ರ ನೀಡಲು ದೃಢೀಕರಿಸುವ ಅಧಿಕಾರಿಯಾಗಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕರಾದ ರವೀಂದ್ರ ಮೊ.ನಂ; 8660523556 ಇವರನ್ನು,  ನಗರದ ಡಾ. ಬಿ.ಆರ್. ಶೆಟ್ಟಿ- ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Subscribe to our newsletter!

Other related posts

error: Content is protected !!