ಮಂಗಳೂರು ವಿಧಾನ ಸಭಾ ಕ್ಷೇತ್ರ: ಆಹಾರ ಅದಾಲತ್

 ಮಂಗಳೂರು ವಿಧಾನ ಸಭಾ ಕ್ಷೇತ್ರ: ಆಹಾರ ಅದಾಲತ್
Share this post

ಮಂಗಳೂರು, ಜೂನ್ 29, 2021: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಜುಲೈ 7 ರಂದು ತೊಕ್ಕೊಟ್ಟಿನ ಯುನಿಟಿ ಹಾಲ್‍ನಲ್ಲಿ ಮಂಗಳೂರು ವಿಧಾನ ಸಭಾ ಕ್ಷೇತ್ರ  ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಸಂಬಂಧಿಸಿದಂತೆ ಶಾಸಕ ಯು.ಟಿ ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಆಹಾರ ಅದಾಲತ್ ನಡೆಯಲಿದೆ.

ಮಂಗಳೂರು ವಿಧಾನ ಸಭಾ ಕ್ಷೇತ್ರದ ಪಡಿತರ ಚೀಟಿದಾರರು ಆಯಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರ್ ಪಟ್ಟಣ ಪಮಚಾಯತ್ ಕಚೇರಿಯಲ್ಲಿ ತಮ್ಮ ಅಹವಾಲುಗಳನ್ನು ಜುಲೈ 2 ರೊಳಗೆ ಸಲ್ಲಿಸುವಂತೆ ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!