ಹೆಚ್ಚಿನ ದರ ಪಡೆದ ಬಸ್ಸುಗಳ ಮೇಲೆ ಸೂಕ್ತ ಕ್ರಮ

 ಹೆಚ್ಚಿನ ದರ ಪಡೆದ ಬಸ್ಸುಗಳ ಮೇಲೆ ಸೂಕ್ತ ಕ್ರಮ
Share this post

ಮಂಗಳೂರು, ಜುಲೈ12, 2021: ಕೋವಿಡ್-19 ಅವಧಿಯಲ್ಲಿ ದಕ್ಷಿಣ ಕನ್ನಡ ಸಾರಿಗೆ ಪ್ರಾಧಿಕಾರವು ನಗರ ಮತ್ತು ಗ್ರಾಮಾಂತರ ಪ್ರಯಾಣ ದರ ಏರಿಕೆ ಮಾಡಿರುವುದಿಲ್ಲ.

ಖಾಸಗಿ ಬಸ್ ಮಾಲೀಕರು ಹೆಚ್ಚುವರಿ ದರ ಪಡೆದಲ್ಲಿ, ಬಸ್ಸಿನ ನೋಂದಣಿ ಸಂಖ್ಯೆ ಹಾಗೂ ರೂಟ್ ಮಾಹಿತಿಯನ್ನು ಲಿಖಿತ ಪುರಾವೆಯೊಂದಿಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಕಚೇರಿಗೆ ಸಲ್ಲಿಸಬೇಕು. ಅಂತಹ ವಾಹನಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!