ಶ್ರೀ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ

 ಶ್ರೀ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ
Share this post

ಉಡುಪಿ, ಜುಲೈ 20, 2021: ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿ ಪ್ರಯುಕ್ತ ಮುದ್ರಾಧಾರಣೆ ನಡೆಯಿತು.

ಬೆಳಗ್ಗೆ ಮಠದ ಋತ್ವಿಜರು ಸುದರ್ಶನ ಹೋಮ ನಡೆಸಿದರು. ನಂತರ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮುದ್ರಾಧಾರಣೆ ಮಾಡಿಕೊಂಡು, ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಹಾಗೂ ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ತಪ್ತ ಮುದ್ರಾಧಾರಣೆ ನಡೆಸಿದರು.

ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಪರ್ಯಾಯ ಮಠಾಧೀಶರು ರಾಜಾಂಗಣದಲ್ಲಿ ಭಕ್ತಾದಿಗಳಿಗೆ ಮುದ್ರಾಧಾರಣೆ ನಡೆಸಿದರು.

ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಭಕ್ತರಿಗೆ ತಮ್ಮ ಮಠದಲ್ಲಿ ಮುದ್ರಾಧಾರಣೆ ನಡೆಸಿದರು.

Subscribe to our newsletter!

Other related posts

error: Content is protected !!