ಶ್ರೀ ಕೃಷ್ಣ ಮಠಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

 ಶ್ರೀ ಕೃಷ್ಣ ಮಠಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ
Share this post

ಉಡುಪಿ, ಆ 06, 2021: ಕರ್ನಾಟಕ ರಾಜ್ಯ ಸರಕಾರದ ಸಚಿವ ಸುನಿಲ್ ಕುಮಾರ್ ಕುಟುಂಬ ಸಮೇತರಾಗಿ ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭೇಟಿ ನೀಡಿದರು.

ಅವರು ದೇವರ ದರ್ಶನದ ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್, ಬಿ.ಜೆ.ಪಿ.ಜಿಲ್ಲಾಧ್ಯಕ್ಷರಾದ ಸುರೇಶ ನಾಯಕ್ ಕುಯಿಲಾಡಿ ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಕರ ಹೆಗ್ಡೆ,ಮಠದ ವ್ಯವಸ್ಥಾಪಕರಾದ ಗೋವಿಂದರಾಜ್,ಶ್ರೀಕೃಷ್ಣ ಸೇವಾಬಳಗದ ರಾಮಚಂದ್ರ ರಾವ್, ಪ್ರದೀಪ್ ರಾವ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!