ದಕ್ಷಿಣ ಕನ್ನಡದಲ್ಲಿ ರಿಕ್ರಿಯೇಷನ್ ಕ್ಲಬ್‍ಗಳು ಬಂದ್: ಜಿಲ್ಲಾಧಿಕಾರಿ

 ದಕ್ಷಿಣ ಕನ್ನಡದಲ್ಲಿ ರಿಕ್ರಿಯೇಷನ್ ಕ್ಲಬ್‍ಗಳು ಬಂದ್: ಜಿಲ್ಲಾಧಿಕಾರಿ
Share this post


ಮಂಗಳೂರು, ಆ.09, 2021: ಜಿಲ್ಲಾ ಸರ್ವೇಕ್ಷಣಾಧಿಕಾರಿಯವರ ವರದಿಯಂತೆ ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಒಂದೆಡೆ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ ಎಂಬ ಅಂಶವನ್ನು ಗಮನಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆ ಪರಿಸ್ಥಿತಿಯು ತಹಬಂದಿಗೆ ಬರುವವರೆಗೆ ರಿಕ್ರಿಯೇಷನ್ ಕ್ಲಬ್‍ಗಳ ಚಲಾವಣೆ, ಕ್ಲಬ್‍ಗಳಲ್ಲಿನ ಮನೋರಂಜನೆಯು ತೀರಾ ಜೀವನಾವಶ್ಯವಲ್ಲವೆಂಬುದನ್ನು ಕೂಡಾ ಮನಗಾಣಲಾಗಿದೆ.

ಅಲ್ಲದೇ ಸರ್ಕಾರಿ ಆದೇಶದಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇತರ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನೈಟ್ ಕಫ್ರ್ಯೂ ಹಾಗೂ ವಾರಂತ್ರ್ಯ ಕಫ್ರ್ಯೂ ದಂತಹ ನಿರ್ಬಂಧಗಳನ್ನು ಹೇರಲಾಗಿರುತ್ತದೆ.

ಈ ಎಲ್ಲಾ ಕಾರಣಗಳು ಹಾಗೂ ಸರ್ಕಾರಿ ಆದೇಶ ಮತ್ತು ವರದಿಯನ್ನು ಗಣನೆಗೆ ತೆಗೆದುಕೊಂಡು, ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಅಂತರದ ಮಾನದಂಡಗಳನ್ನು ಪಾಲಿಸಲು ಅನುಕೂಲವಾಗುವಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಕಾರ್ಯಚರಿಸುತ್ತಿರುವ ಎಲ್ಲಾ ರಿಕ್ರಿಯೇಷನ್ ಕ್ಲಬ್ ಗಳನ್ನು ತಕ್ಷಣದಿಂದ ಅನ್ವಯಿಸುವಂತೆ ಮುಂದಿನ ಆದೇಶದವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆದೇಶ ಹೊರಡಿಸಿದ್ದಾರೆ. .

ಆದೇಶವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ 1860ರ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4, 5 ಮತ್ತು 10 ರಂತೆ ಹಾಗೂ ಇತರ ಕಾನೂನು ರೀತ್ಯಾ ಕ್ರಮ ಜರಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ

Subscribe to our newsletter!

Other related posts

error: Content is protected !!