ಕಾರ್ಮಿಕ ಆದಾಲತ್ ಮಾಸಾಚಾರಣೆ

 ಕಾರ್ಮಿಕ ಆದಾಲತ್ ಮಾಸಾಚಾರಣೆ
Share this post

ಮಂಗಳೂರು ಆ.24, 2021: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಲ್ಲಿ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಪಡಿಸಲು ಸಚಿವರ ನಿರ್ದೇಶನದಂತೆ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದೆ.

ಆ ಪ್ರಯುಕ್ತ ಜಿಲ್ಲೆಯ ಎಲ್ಲಾ ಕಾರ್ಮಿಕ ಇಲಾಖೆಯ ಕಚೇರಿಗಳಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ಹಾಗೂ ವಿವಿಧ ಮಂಡಳಿಗಳ ಮೂಲಕ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಡಿ ಸ್ವೀಕೃತವಾಗಿ, ಇದುವರೆಗೆ ಇತ್ಯರ್ಥವಾಗದೆ ಬಾಕಿ ಉಳಿದಿರುವ ಪ್ರಕರಣಗಳನ್ನು, ಕಡತಗಳನ್ನು ಹಾಗೂ ವಿವಿಧ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ 2021ರ ಸೆಪ್ಟೆಂಬರ್ 16 ರವರೆಗೆ ಮಾಡಲು ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಬಾಕಿ ಇರುವ ಕಡತಗಳನ್ನು ವಿಲೇವಾರಿ ಮಾಡಲು ಸಹಕರಿಸುವಂತೆ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!