ಕಾಲುಸಂಕ ನಿರ್ಮಾಣಕ್ಕೆ ಭೂಮಿಪೂಜೆ

 ಕಾಲುಸಂಕ ನಿರ್ಮಾಣಕ್ಕೆ ಭೂಮಿಪೂಜೆ
Share this post

ಮಂಗಳೂರು, ಜ 16, 2022: ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕಾರ್ಮಿಕ ಕಾಲೋನಿಯ ಬಳಿ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಕಾರ್ಮಿಕ ಕಾಲೋನಿಯ ಬಳಿ ಕಾಲುಸಂಕ ನಿರ್ಮಾಣದ ಬೇಡಿಕೆಯಂತೆ ಲೋಕೋಪಯೋಗಿ ಇಲಾಖೆಯಿಂದ 10 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಜನರಿಗೆ ನೀಡ್ದ ಭರವಸೆಯಂತೆ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೇಟರ್ ಕಿಶೋರ್ ಕೊಟ್ಟಾರಿ, ಬಿಜೆಪಿ ಮುಖಂಡರಾದ ಅಜಯ್ ಕುಲಶೇಖರ, ರಾಮಚಂದ್ರ ಚೌಟ, ಅಶ್ವಿತ್ ಕೊಟ್ಟಾರಿ, ಮಾಧವ್ ಭಟ್, ವಸಂತ್ ಜೆ ಪೂಜಾರಿ, ರವಿ ಕಕ್ಕೆಬೆಟ್ಟು, ಉಮಾನಾಥ್ ಕೊಟ್ಟಾರಿ, ಲಿಯೋ ಸರಕೋಡಿ, ಸವಿತಾ ರೈ, ದೇವಿ ಪ್ರಸಾದ್, ರವೀಂದ್ರ ಕುಚ್ಚಿಕಾಡು, ದಿನೇಶ್ ಶೆಣೈ, ಸ್ಥಳೀಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!