ಉಡುಪಿ ಪರ್ಯಾಯ: ನಾಲ್ಕನೇ ಬಾರಿ ಸರ್ವಜ್ಞ ಪೀಠವೇರಿದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು

 ಉಡುಪಿ ಪರ್ಯಾಯ: ನಾಲ್ಕನೇ ಬಾರಿ ಸರ್ವಜ್ಞ ಪೀಠವೇರಿದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು
Share this post

ಉಡುಪಿ, ಜ 18, 2022 : ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಇಂದು ನಾಲ್ಕನೇ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿದರು.

ಕಾಪು ಬಳಿಯ ದಂಡ ತೀರ್ಥದಲ್ಲಿ ಶ್ರೀಪಾದರು ಪವಿತ್ರ ಸ್ನಾನ ಮಾಡಿ ಉಡುಪಿ ಆಗಮಿಸಿ ಜೋಡುಕಟ್ಟೆಯಲ್ಲಿ ಪಟ್ಟದ ದೇವರಿಗೆ ಮಂಗಳಾರತಿ ಬೆಳಗಿಸಿದರು. ನಂತರ ಪರ್ಯಾಯ ಮೆರವಣಿಗೆ ಆರಂಭವಾಯಿತು.

ಉಡುಪಿಯ ರಥಬೀದಿಯ ಕನಕನ ಕಿಂಡಿಯಲ್ಲಿ ಶ್ರೀ ಕೃಷ್ಣದೇವರ ದರ್ಶನಮಾಡಿ ನವಗ್ರಹ ದಾನ ನೀಡಿ ಚಂದ್ರಮೌಳೀಶ್ವರ ಮತ್ತು ಅನಂತೇಶ್ವರ ದೇವರ ದರ್ಶನ ಪಡೆದು ಅನಂತೇಶ್ವರದಲ್ಲಿ ಶ್ರೀ ಮಧ್ವಾಚಾರ್ಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಸಿದರು.

ಶ್ರೀ ಕೃಷ್ಣ ಮಠದ ಮುಂಭಾಗದಲ್ಲಿ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಕೃಷ್ಣಾಪುರ ಶ್ರೀಗಳನ್ನು ಸ್ವಾಗತಿಸಿದರು. ಶ್ರೀಕೃಷ್ಣ ದೇವರ ದರ್ಶನ ಪಡೆದು ಕೃಷ್ಣಾಪುರ ಮಠದ ಪಟ್ಟದ ದೇವರಿಗೆ ಮಂಗಳಾರತಿ ಬೆಳಗಿದರು. ಚಂದ್ರಶಾಲೆಯಲ್ಲಿ ಪರ್ಯಾಯ ಅದಮಾರು ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಯಿತು.

ಮಧ್ವಾಚಾರ್ಯರ ಸನ್ನಿಧಿಯ ಎದುರು ಅದಮಾರು ಮಠಾಧೀಶರು ಕೃಷ್ಣಾಪುರ ಮಠಾಧೀಶರಿಗೆ ಅಕ್ಷಯ ಪಾತ್ರೆ ಹಸ್ತಾಂತರ ಮಾಡಿದರು. ನಂತರ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಚತುರ್ಥ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿದರು.

ಪರ್ಯಾಯ ಶ್ರೀಗಳಿಂದ ಬಡಗುಮಾಳಿಗೆಯ ಅರಳು ಗದ್ದುಗೆಯಲ್ಲಿ ಗಂದಾದ್ಯುಪಚಾರ, ಅಷ್ಟ ಮಠಾಧೀಶರಿಂದ ಪಟ್ಟಕಣಿಕೆ ಹಾಗೂಮಾಲಿಕೆ ಮಂಗಳಾರತಿ ನಡೆಯಿತು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!