ಹೇರೂರು ಹೆರಂಜೆ ರೈಲ್ವೆ ಗೇಟ್ ಬಳಿಯ ರಸ್ತೆಗೆ ಖಾಸಗಿ ಜಾಗದ ಸಮಸ್ಯೆ: ರಘುಪತಿ ಭಟ್ ಸ್ಥಳಕ್ಕೆ ಭೇಟಿ

 ಹೇರೂರು ಹೆರಂಜೆ ರೈಲ್ವೆ ಗೇಟ್ ಬಳಿಯ ರಸ್ತೆಗೆ ಖಾಸಗಿ ಜಾಗದ ಸಮಸ್ಯೆ: ರಘುಪತಿ ಭಟ್ ಸ್ಥಳಕ್ಕೆ ಭೇಟಿ
Share this post

ಉಡುಪಿ, ಫೆ 12, 2022: ಉಡುಪಿ ವಿಧಾನಸಭಾ ಕ್ಷೇತ್ರದ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಹೇರಂಜೆ ರೈಲ್ವೆ ಗೇಟ್ ಬಳಿಯ ರಸ್ತೆಗೆ ಖಾಸಗಿ ಜಾಗದ ಸಮಸ್ಯೆ ಇದ್ದುದರಿಂದ ಇಂದು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಖಾಸಗಿ ಜಾಗದವರೊಂದಿಗೆ ಚರ್ಚಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ರಸ್ತೆಗೆ ತಡೆಯೊಡ್ಡದಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷರಾದ ಲಕ್ಷ್ಮೀ, ಸದಸ್ಯರಾದ ಉದಯ್ ಕಾಮತ್, ಪ್ರೇಮಾ ಶೆಟ್ಟಿ ಹಾಗೂ ಸ್ಥಳೀಯ ಉಪಸ್ಥಿತರಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!