ಉಡುಪಿ: ರಾಜ್ಯ ಮಟ್ಟದ ಜಲ ಜಾನಪದೋತ್ಸವ

 ಉಡುಪಿ: ರಾಜ್ಯ ಮಟ್ಟದ ಜಲ ಜಾನಪದೋತ್ಸವ
Share this post

ಉಡುಪಿ, ಮಾ 19, 2022: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಯುವ ಬ್ರಿಗೇಡ್ ಬೆಂಗಳೂರು, ಕರಾವಳಿ ವಿಭಾಗೀಯ ಘಟಕ ಮರವಂತೆ ಮತ್ತು ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಜಲ ಜಾನಪದೋತ್ಸವ ಕಾರ್ಯಕ್ರಮವು ಮಾರ್ಚ್ 20 ರಂದು ಬೆಳಗ್ಗೆ 8 ರಿಂದ ಮರವಂತೆ ರಾಷ್ಟ್ರೀಯ ಹೆದ್ದಾರಿಯ ಸಮುದ್ರ ಕಿನಾರೆಯ ಸಮೀಪ ನಡೆಯಲಿದೆ.    

ಕಾರ್ಯಕ್ರಮವನ್ನು ರಾಜ್ಯದ ಬಂದರು, ಒಳನಾಡು ಜಲಸಾರಿಗೆ ಮತ್ತು ಮೀನುಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಜನಪದ ಗೀತೆಗಳ ಸ್ಪರ್ಧೆಯನ್ನು ರಾಜ್ಯದ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ, ಪುಸ್ತಕ ಪ್ರದರ್ಶನವನ್ನು ಸಂಸದ ಬಿ. ವೈ.ರಾಘವೇಂದ್ರ ಹಾಗೂ ಪಾರಂಪರಿಕ ವಸ್ತು ಪ್ರದರ್ಶನವನ್ನು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಉದ್ಘಾಟಿಸಲಿದ್ದು, ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಅಧ್ಯಕ್ಷತೆ ವಹಿಸಲಿದ್ದಾರೆ.  

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!