ಉಡುಪಿ: ಹಾಲಾಡಿಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

 ಉಡುಪಿ: ಹಾಲಾಡಿಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
Share this post

ಉಡುಪಿ, ಏ 12, 2022: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಏಪ್ರಿಲ್ 16 ರಂದು ಬೆಳಗ್ಗೆ 10.30 ಕ್ಕೆ ಹಾಲಾಡಿಯ ಶಾಲಿನಿ ಜಿ ಶಂಕರ್ ಕನ್ವೆಷನ್ ಸೆಂಟರ್ ನಲ್ಲಿ ಹಾಗೂ ಮಧ್ಯಾಹ್ನ 3.30 ಕ್ಕೆ ಅಮಾಸೆಬೈಲಿನ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನ ಕೂಡಕಟ್ಟು ಶ್ಯಾಮಿಹಕ್ಲು ನಲ್ಲಿ ನಡೆಯಲಿದೆ.

ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮ ಪಂಚಾಯತ್ ಮತ್ತು ಅಮಾಸೆಬೈಲು ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಆಯಾ ಗ್ರಾಮದ ಗ್ರಾಮಕರಣಿಕರಿಗೆ ನೀಡಿ, ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!