ಮೇ. 6 ರಂದು ಶ್ರೀ ಶಂಕರಾಚಾರ್ಯ ಜಯಂತಿ

 ಮೇ. 6 ರಂದು ಶ್ರೀ ಶಂಕರಾಚಾರ್ಯ ಜಯಂತಿ
Share this post

ಮಂಗಳೂರು, ಮೇ.04, 2022: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಹವ್ಯಕ ಮಂಡಲದ ಜಂಟಿ ಆಶ್ರಯದಲ್ಲಿ ಮೇ.6ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಂತೂರಿನಲ್ಲಿರುವ ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರ ಶ್ರೀ ಸಭಾಭವನದಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಗುವುದು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ವಿ.ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೌರವ ಉಪಸ್ಥಿತಿವಹಿಸಲಿದ್ದಾರೆ.

ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.  

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!