ಮಂಗಳೂರು: ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

 ಮಂಗಳೂರು: ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ
Share this post

ಮಂಗಳೂರು,ಮೇ.07, 2022: ಮಂಗಳೂರು ನಗರದಲ್ಲಿ ನಡೆಯುವ ವಿವಿಧ ಕಾಮಗಾರಿಗಳಿಂದಾಗಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.

ಕದ್ರಿ ದೇವಸ್ಥಾನ:

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ದ್ವಾರದ ಮುಂದೆ ಕಲ್ವರ್ಟ್ ಒಳಚರಂಡಿ ಜಾಲದ ವ್ಯವಸ್ಥೆಯನ್ನು ಪುನರುಜ್ಜೀವನ ಮತ್ತು ಪುನರ್ ನಿರ್ಮಾಣ ಮಾಡುವ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ 1988ರ ಪ್ರಕಾರ ಮೇ.7 ರಿಂದ ಜೂ.5ರ ವರೆಗೆ 30 ದಿನಗಳ ಕಾಲ ಬದಲಿ ರಸ್ತೆ  ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಕಾಮಗಾರಿ ನಡೆಯುವ ವೇಳೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

ಬಟ್ಟಗುಡ್ಡ ಜಂಕ್ಷನ್ ನಿಂದ ಕದ್ರಿ ದೇವಸ್ಥಾನ ರಸ್ತೆಯ ಮೂಲಕ ಮಲ್ಲಿಕಟ್ಟೆ ಜಂಕ್ಷನ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಬಟ್ಟಗುಡ್ಡ ಜಂಕ್ಷನ್ ನಿಂದ ಕದ್ರಿ ಕಂಬ್ಳ ರಸ್ತೆಯಲ್ಲಿ ನೇರವಾಗಿ ಸಂಚರಿಸಿ ಭಾರತ್ ಬೀಡಿ ಜಂಕ್ಷನ್‍ನಲ್ಲಿ ಎಡಕ್ಕೆ ತಿರುಗಿ ಮಲ್ಲಿಕಟ್ಟೆ ಜಂಕ್ಷನ್ ಕಡೆಗೆ ಸಂಚರಿಸಬೇಕು.

ಮಲ್ಲಿಕಟ್ಟೆ ಜಂಕ್ಷನ್ ನಿಂದ ಕದ್ರಿ ದೇವಸ್ಥಾನದ ರಸ್ತೆಯ ಮೂಲಕ ಬಟ್ಟಗುಡ್ಡ ಜಂಕ್ಷನ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಮಲ್ಲಿಕಟ್ಟೆ ಜಂಕ್ಷನ್‍ನಿಂದ ಭಾರತ್ ಬೀಡಿ ಜಂಕ್ಷನ್ ಕಡೆಗೆ ಸಂಚರಿಸಿ ಬಲಕ್ಕೆ ತಿರುಗಿ ಕದ್ರಿ ಕಂಬ್ಳ ರಸ್ತೆಯ ಮೂಲಕ ಬಟ್ಟಗುಡ್ಡ ಜಂಕ್ಷನ್ ಕಡೆಗೆ ಸಂಚರಿಸಬೇಕು.

ಮಲ್ಲಿಕಟ್ಟೆ ವೃತ್ತದ ಬಳಿ ಇರುವ ಕದ್ರಿ ದೇವಸ್ಥಾನದ ದ್ವಾರದ ಮೂಲಕ ಕದ್ರಿ ದೇವಸ್ಥಾನಕ್ಕೆ ಹೋಗುವ ಎಲ್ಲಾ ವಾಹನಗಳು ಮಲ್ಲಿಕಟ್ಟೆ ಜಂಕ್ಷನ್‍ನಲ್ಲಿ ನೇರವಾಗಿ ಭಾರತ್ ಬೀಡಿ ಜಂಕ್ಷನ್ ಕಡೆಗೆ ಸಂಚರಿಸಿ ಬಲಕ್ಕೆ ತಿರುಗಿ ಕದ್ರಿ ಕಂಬ್ಳ ರಸ್ತೆಯಲ್ಲಿ ಮುಂದಕ್ಕೆ ಸಂಚರಿಸಿ ಕದ್ರಿ ದೇವಸ್ಥಾನದ ರಸ್ತೆ ಮೂಲಕ ಕದ್ರಿ ದೇವಸ್ಥಾನ ತಲುಪಬೇಕು.


ಹೊಸಬೆಟ್ಟು ಫಿಶರೀಸ್ ರಸ್ತೆ:
ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ವಿಭಾಗ ನಂಬರ್-07ರ ಹೊಸಬೆಟ್ಟು ಫಿಶರೀಸ್ ರಸ್ತೆಯಲ್ಲಿ ಕಿರುಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ 1988ರ ಪ್ರಕಾರ ಜೂ.19ರ ವರೆಗೆ 45 ದಿನಗಳ ಕಾಲ ಬದಲಿ ರಸ್ತೆ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಕಾಮಗಾರಿ ನಡೆಯುವ ವೇಳೆ ರಾಷ್ಟ್ರೀಯ ಹೆದ್ದಾರಿ-66ರ ಹೊಸಬೆಟ್ಟು ಜಂಕ್ಷನ್ ಕಡೆಯಿಂದ ಹೊಸಬೆಟ್ಟು ಬೀಚ್ ಕಡೆ ಅಂದರೆ ಫಿಶರೀಸ್ ರಸ್ತೆ ಕಡೆಗೆ ಹೋಗುವಂತಹ ಹಾಗೂ ಬರುವಂತಹ ಲಘುವಾಹನಗಳು(ಕಾರು ಆಟೋರಿಕಾ, ದ್ವಿಚಕ್ರ) ರಾಷ್ಟ್ರೀಯ ಹೆದ್ದಾರಿ-66ರ ರಸ್ತೆಯಲ್ಲಿ ಹೊಸಬೆಟ್ಟು ಜಂಕ್ಷನ್‍ನಲ್ಲಿ ಇರುವ ಬಸ್ಸು ನಿಲ್ದಾಣದ ಶ್ರೀ ಪವನ್ ಮಾರ್ಬಲ್ಸ್ & ಗ್ರಾನೈಟ್ಸ್ ನ ಕಾಂಕ್ರೀಟ್ ರಸ್ತೆಯಲ್ಲಿ ಸಾಗಿ ಶ್ರೀ ಧನ್ವಂತರಿ ಆಯುರ್ವೇದಿಕ್ ಕ್ಲಿನಿಕ್ ರಸ್ತೆಯ ಮೂಲಕ ಸಾಗಿ ಫಿಶರೀಸ್ ಶಾಲೆಯ ಮುಖ್ಯ ರಸ್ತೆಯಲ್ಲಿ ಸಾಗಿ ಫಿಶರೀಸ್ ಹಾಗೂ ಬೀಚ್ ಕಡೆಗೆ ಸಂಚರಿಸಿ ವಾಪಾಸು ಬರಲು ಅದೇ ಮಾರ್ಗದ ರಸ್ತೆಯನ್ನು ಉಪಯೋಗಿಸಬೇಕು.

ಸುರತ್ಕಲ್ ಕಡೆಗೆ ಸಂಚರಿಸುವ ರೂಟ್ ನಂ.59 ಬಸ್ಸುಗಳು ರಾಷ್ಟ್ರೀಯ ಹೆದ್ದಾರಿ 66ರ ಚಿತ್ರಾಪುರ ದ್ವಾರ ರಸ್ತೆಯ ಮೂಲಕ ಶೆಟ್ಟಿ ಜನರಲ್ ಸ್ಟೋರ್‍ನ ಮುಂದೆ ಸಾಗಿ ಫಿಶರೀಸ್ ಶಾಲೆಯಾಗಿ ಮುಂದೆ ಸಾಗಿ ಈಶ್ವರ ನಗರ ಬಲ ರಸ್ತೆಯ ಮೂಲಕ ನವನಗರ ನಂದಾದೀಪ ಅಪಾರ್ಟ್ ಮೆಂಟ್ ಕಡೆ ಸಾಗಿ ಲಿಂಗಪ್ಪ ಸಾಲಿಯಾನ್ ಕಂಪೌಂಡ್ ಬಳಿ ಬಲ ರಸ್ತೆ ಕಡೆ ಸಾಗಿ ಕಾಳಪ್ಪಯ್ಯ ರಸ್ತೆಯ ಮೂಲಕ ರಾಷ್ಟ್ರೀಯ ಹೆದ್ದಾರಿ-66ರ ರಸ್ತೆಯ ಮೂಲಕ ಸುರತ್ಕಲ್ ಕಡೆ ಸಂಚರಿಸಿ ವಾಪಾಸು ಬರಲು ಅದೇ ಮಾರ್ಗದ ರಸ್ತೆಯನ್ನು ಉಪಯೋಗಿಸಬೇಕು.

ಕೋಡಿಕಲ್ ಮುಖ್ಯ ರಸ್ತೆ:
ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಕೋಡಿಕಲ್ ಮುಖ್ಯರಸ್ತೆಯಲ್ಲಿ 5ನೇ ಬಿ ಅಡ್ಡ ರಸ್ತೆ ಬಳಿಯಿಂದ 10ನೇ ಬಿ ಅಡ್ಡ ರಸ್ತೆಯವರೆಗೆ ಕಾಂಕ್ರೀಟಿಕರಣ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ 1988ರ ಪ್ರಕಾರ ಜೂ.19ರ ವರೆಗೆ 45 ದಿನಗಳ ಕಾಲ ಬದಲಿ ರಸ್ತೆ  ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಕಾಮಗಾರಿ ನಡೆಯುವ ವೇಳೆ ಕೋಡಿಕಲ್ ಮುಖ್ಯ ರಸ್ತೆಯಲ್ಲಿನ 5ನೇ ಬಿ ಅಡ್ಡ ರಸ್ತೆಯಿಂದ 10ನೇ ಬಿ ಅಡ್ಡ ರಸ್ತೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅಲ್ಲದೇ ಪರ್ಯಾಯವಾಗಿ 5ನೇ ಬಿ ಅಡ್ಡ ರಸ್ತೆ, 4ನೇ ಬಿ ಅಡ್ಡ ರಸ್ತೆ, 1ನೇ ಬಿ ಅಡ್ಡ ರಸ್ತೆ, 8ನೇ ಬಿ ಅಡ್ಡ ರಸ್ತೆ, 9ನೇ ಬಿ ಅಡ್ಡ ರಸ್ತೆ ಮತ್ತು 10ನೇ ಬಿ ಅಡ್ಡ ರಸ್ತೆಗಳಲ್ಲಿ ವಾಹನಗಳು ಸಂಚರಿಸಬೇಕು.

ರೂಟ್ ಬಸ್ಸುಗಳು ಉರ್ವ ಸ್ಕೂಲ್ ಜಂಕ್ಷನ್ ನಿಂದ ಮುಂದುವರೆದು ಕೋಡಿಕಲ್ ಕ್ರಾಸ್ ಮೂಲಕ ಬಾಪೂಜಿ ನಗರ ರಸ್ತೆಯಿಂದಾಗಿ ಕೋಡಿಕಲ್ ಕಟ್ಟೆ ಕಡೆಗೆ ಸಂಚರಿಸುವುದು ಹಾಗೂ ಕೋಡಿಕಲ್ ಕಟ್ಟೆಯಿಂದ ಸ್ಟೇಟ್ ಬ್ಯಾಂಕ್‍ಗೆ ಸಂಚರಿಸುವ ಬಸ್ಸುಗಳು ಇದೇ ರಸ್ತೆಯ ಮುಖಾಂತರ ಸಂಚರಿಸಲು ಪೆÇಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!