ಮೇ.10 ರಂದು ಆಧಾರ್ ಸೇವಾ ಕೇಂದ್ರಕ್ಕೆ ಚಾಲನೆ

 ಮೇ.10 ರಂದು ಆಧಾರ್ ಸೇವಾ ಕೇಂದ್ರಕ್ಕೆ ಚಾಲನೆ
Share this post

ಮಂಗಳೂರು, ಮೇ.9, 2022: ನಗರದ ಹಂಪನಕಟ್ಟೆಯ ಬಲ್ಮಠ ರಸ್ತೆಯಲ್ಲಿರುವ ಕ್ರಿಸ್ಟಲ್ ಆರ್ಕೇಡ್‍ನಲ್ಲಿ ಯು.ಐ.ಡಿ.ಎ.ಐ ವತಿಯಿಂದ ನೂತನವಾಗಿ ಆಧಾರ್ ಸೇವಾ ಕೇಂದ್ರವು ಮೇ.10ರ ಮಂಗಳವಾರ ಯು.ಐ.ಡಿ.ಎ.ಐ ಉನ್ನತ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಗಲಿದೆ.

ಈ ಆಧಾರ್ ಸೇವಾ ಕೇಂದ್ರವು ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ  ಕಾರ್ಯನಿರ್ವಹಿಸಲಿದ್ದು ಆಧಾರ್ ಗೆ ಸಂಬಂಧಿಸಿದ ಎಲ್ಲಾ ನೋಂದಣಿ ಹಾಗೂ ತಿದ್ದುಪಡಿ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!