ಮನೆ ಮಂಜೂರಾತಿ :ಅರ್ಜಿ ಆಹ್ವಾನ

 ಮನೆ ಮಂಜೂರಾತಿ :ಅರ್ಜಿ ಆಹ್ವಾನ
Share this post

ಉಡುಪಿ, ಮೇ 11, 2022: ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿಗೆ ಬಸವ ವಸತಿ ಯೋಜನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಹೊಸಮನೆ ನಿರ್ಮಿಸಲು ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ಹಾಗೂ ಅಲ್ಪಸಂಖ್ಯಾತ ವರ್ಗದ ಸ್ವಂತ ನಿವೇಶನ ಹೊಂದಿದವರಿಂದ ಅರ್ಜಿ ಆಹ್ವಾನಿಸಲಾಗಿದೆ.   

ಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸುವಂತೆ ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ. 

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!