ಸಂತೆ, ಜಾತ್ರೆ ನಿಷೇಧ
![ಸಂತೆ, ಜಾತ್ರೆ ನಿಷೇಧ](https://thecanarapost.com/wp-content/uploads/2021/03/WhatsApp-Image-2021-03-20-at-8.02.02-PM-850x560.jpeg)
ಮಂಗಳೂರು,ಮೇ.17, 2022: ತಾಲೂಕಿನ ಮುಚ್ಚೂರು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮ ಪಂಚಾಯತ್ ಹಾಗೂ ಪುತ್ತೂರು ತಾಲೂಕಿನ 10-ಬಲ್ನಾಡು ಗ್ರಾಮ ಪಂಚಾಯತ್ಗಳಲ್ಲಿ ಮೇ.20ರಂದು ಉಪಚುನಾವಣೆಯ ಮತದಾನ ನಡೆಯಲಿದೆ.
ಆದ್ದರಿಂದ ಮೇ.20ರ ಮತದಾನದ ದಿನದಂದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36ರ ಅಡಿಯಲ್ಲಿ ಚುನಾವಣೆ ನಡೆಯುವ ದಿನದಂದು ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.