ಮೇ. 21 ರಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ

 ಮೇ. 21 ರಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ
Share this post

ಮಂಗಳೂರು, ಮೇ.20, 2022: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ.ಪೊನ್ನುರಾಜ್ ಅವರು ಮೇ.21ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಅವರು ಮೇ.21ರ ಶನಿವಾರ ಬೆಳಗ್ಗೆ 6.15ಕ್ಕೆ ಬೆಂಗಳೂರಿನಿಂದ ಹೊರಟು 7.15ಕ್ಕೆ ಮಂಗಳೂರು ತಲುಪಲಿದ್ದಾರೆ. ನಂತರ ಸಕ್ರ್ಯೂಟ್ ಹೌಸ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಮುಂಗಾರು ಪೂರ್ವ ಸಿದ್ಧತೆಯ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಬೆಳಗ್ಗೆ 11.30ಕ್ಕೆ ಕೆಸ್ವಾನ್, ಸಕಾಲ, ಇ-ಆಫೀಸ್ ಮತ್ತು ಗ್ರಾಮ ಒನ್ ಸಿಬ್ಬಂದಿ ಮತ್ತು ಗ್ರಾಮ ಒನ್ ಯೋಜನೆಯ ಕುರಿತು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಂಬಂಧಿಸಿದವರೊಂದಿಗೆ ಚರ್ಚಿಸುವರು.

ಮಧ್ಯಾಹ್ನ 12.30ಕ್ಕೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಬೆಳೆ ವಿಮೆ ಕುರಿತು ಚರ್ಚೆ ನಡೆಸುವರು. ಮಧ್ಯಾಹ್ನ 3 ರಿಂದ ಕೆ.ಯು.ಐ.ಡಿ.ಎಫ್.ಸಿ ಕಾಮಗಾರಿಗಳು, ಸಂಜೆ 5 ಗಂಟೆಗೆ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ.

ನಂತರ ರಾತ್ರಿ 8.40ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಅವರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!