ಉಡುಪಿ: ಎ.ಸಿ.ಬಿ ಯಿಂದ ಅಹವಾಲು ಸ್ವೀಕಾರ

 ಉಡುಪಿ: ಎ.ಸಿ.ಬಿ ಯಿಂದ ಅಹವಾಲು ಸ್ವೀಕಾರ
Share this post

ಉಡುಪಿ, ಮೇ 21, 2022: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮೇ 24 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಬೈಂದೂರು ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಮತ್ತು ಮೇ 25 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷö್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!