ಸಮಗ್ರ ಗಿರಿಜನ ಯೋಜನೆಯಡಿ ಅರ್ಜಿ ಆಹ್ವಾನ

 ಸಮಗ್ರ ಗಿರಿಜನ ಯೋಜನೆಯಡಿ ಅರ್ಜಿ ಆಹ್ವಾನ
Share this post

ಮಂಗಳೂರು,ಮೇ.26, 2022: ಸಮಗ್ರ ಗಿರಿಜನ ಯೋಜನೆಯಡಿ 2022-23ನೇ ಸಾಲಿನ ಜಿಲ್ಲೆಯ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ 2 ವರ್ಷ ಪ್ರಾಯೋಗಿಕ ತರಬೇತಿ ಪಡೆದುಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಅವಧಿಯಲ್ಲಿ 10,000 ರೂ.ಗಳ ಮಾಸಿಕ ಶಿಷ್ಯ ವೇತನ ನೀಡಲಾಗುವುದು, ಅಭ್ಯರ್ಥಿಗಳು 2022ರ ಜುಲೈ 5ರೊಳಗೆ ವೆಬ್‍ಸೈಟ್ www.tw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನಂತರ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಕಚೇರಿ, ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆ, ಅಬ್ಬಕ್ಕನಗರ, ಮಂಗಳೂರು ಇಲ್ಲಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.  

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!