ಜೂ.4 ರಂದು ವಿಧಾನಸಭಾಧ್ಯಕ್ಷರ ಜಿಲ್ಲಾ ಪ್ರವಾಸ

 ಜೂ.4 ರಂದು ವಿಧಾನಸಭಾಧ್ಯಕ್ಷರ ಜಿಲ್ಲಾ ಪ್ರವಾಸ
Share this post

ಮಂಗಳೂರು,ಜೂ.03, 2022: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜೂ.4 ರಂದು (ಶನಿವಾರ) ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಜೂ.4ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಉಡುಪಿಯಿಂದ ಹೊರಟು ಮಧ್ಯಾಹ್ನ 12.30ಕ್ಕೆ ಮಂಗಳೂರಿನ ಸಕ್ರ್ಯೂಟ್ ಹೌಸ್‍ಗೆ ಆಗಮಿಸಿ ವಾಸ್ತವ್ಯ ಮಾಡುವರು.

ಸಂಜೆ 4.45ರಿಂದ 6.30ರ ವರೆಗೆ ನಗರದ ಮಂಗಳಾದೇವಿ ಬಳಿಯಿರುವ ರಾಮಕೃಷ್ಣ ಮಠ ಆಯೋಜಿಸಿರುವ ಅಮೃತ ಸಂಗಮ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು.

ಸಂಜೆ 7.30ಕ್ಕೆ ಮಂಗಳೂರಿನಿಂದ ಕಾಗೇರಿಗೆ ರಸ್ತೆ ಮಾರ್ಗವಾಗಿ ಪ್ರಯಾಣಿಸುವರು ಎಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!