ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ: ಅರ್ಜಿ ಆಹ್ವಾನ

 ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ: ಅರ್ಜಿ ಆಹ್ವಾನ
Share this post

ಉಡುಪಿ, ಆಗಸ್ಟ್ 21, 2022: ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರು ಪರಿಹಾರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನ ಮೇ 15 ಕ್ಕಿಂತ ಮೊದಲು ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣದಲ್ಲಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದ್ದು, ಮೇ 16 ರ ನಂತರ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಪರಿಹಾರ ಪಡೆಯಲು 90 ದಿನಗಳ ಕಾಲಮಿತಿ ನಿಗಧಿಪಡಿಸಲಾಗಿದೆ.

ಪ್ರಯೋಗಾಲಯದಿಂದ ಪಡೆದಿರುವ ಮೃತ ವ್ಯಕ್ತಿಯ ಪಾಸಿಟಿವ್ ರಿಪೋರ್ಟ್, ಸಂಬಂಧಿಸಿದ ಆಸ್ಪತ್ರೆಯ ರಿಪೋರ್ಟ್, ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ ದೃಢೀಕರಣ, ಮೃತರ ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ, ಮರಣ ಪ್ರಮಾಣ ಪತ್ರ ಹಾಗೂ ಅರ್ಜಿದಾರರ ಪಡಿತರ ಚೀಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ, ಸ್ವಯಂ ಘೋಷಣಾ ಪತ್ರ ಹಾಗೂ ಕುಟುಂಬ ಸದಸ್ಯರ ನಿರಪೇಕ್ಷಣಾ ಪತ್ರದ ದಾಖಲೆಗಳೊಂದಿಗೆ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನು ಬದ್ಧ ವಾರಸುದಾರರು ತಮ್ಮ ವಾಸಸ್ಥಳ ವ್ಯಾಪ್ತಿಯ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿ, ಪರಿಹಾರ ಪಡೆಯಬಹುದಾಗಿದೆ ಎಂದು ಕಾರ್ಕಳ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!