ಮರಗಳ ತೆರವು: ಕಾರ್ಕಳ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ

 ಮರಗಳ ತೆರವು: ಕಾರ್ಕಳ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ
Share this post

ಉಡುಪಿ, ಆಗಸ್ಟ್ 26, 2022: ಹೆಬ್ರಿ ತಾಲೂಕು ವರಂಗ ಗ್ರಾಮದ ಕಾಡುಹೊಳೆ ಸೇತುವೆಯಿಂದ ಚಟ್ಕಲ್ ಪಾದೆ ಜಂಕ್ಷನ್‌ವರೆಗೆ ಹಾಗೂ ಕಾರ್ಕಳ ತಾಲೂಕು ಕಡ್ತಲ ಗ್ರಾಮದ ಕೈಕಂಬದಿಂದ ದೊಂಡೆರಂಗಡಿಯವರೆಗೆ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆಯಾಗುವ  236 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಸೆಪ್ಟಂಬರ್ 3 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಕಳ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

    ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸಭೆ ನಡೆಯುವ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ, ಕುಂದಾಪುರ ಇವರಿಗೆ ಲಿಖಿತ ರೂಪದಲ್ಲಿ ಹಾಗೂ ಇ-ಮೇಲ್ [email protected] ನಲ್ಲಿಯೂ ಸಹ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!