ಇ-ಕೆವೈಸಿ: ಸೆ. 22ಕ್ಕೆ ಕೊನೆಯ ಗಡವು

 ಇ-ಕೆವೈಸಿ: ಸೆ. 22ಕ್ಕೆ ಕೊನೆಯ ಗಡವು
Share this post

ಮಂಗಳೂರು,ಸೆ.13, 2022: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಇದೇ ಸೆಪ್ಟೆಂಬರ್ 22 ಕೊನೆಯ ದಿನವಾಗಿದೆ.

ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov.in ಪೋರ್ಟಲ್‍ನ ಫಾರ್ಮರ್ಸ್ ಕೋರ್ನರ್‍ನ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್‍ಸಿ)/ ಗ್ರಾಮಒನ್ ಸೇವಾ ಕೇಂದ್ರದಲ್ಲಿಯೂ  ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!