ಮುರಾದಲ್ಲಿ ಅಪರ ಜಿಲ್ಲಾಧಿಕಾರಿಯವರಿಂದ ಗ್ರಾಮ ವಾಸ್ತವ್ಯ
![ಮುರಾದಲ್ಲಿ ಅಪರ ಜಿಲ್ಲಾಧಿಕಾರಿಯವರಿಂದ ಗ್ರಾಮ ವಾಸ್ತವ್ಯ](https://thecanarapost.com/wp-content/uploads/2022/05/grama-vastavya-850x560.jpg)
ಮಂಗಳೂರು, ಸೆ.16, 2022: ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರಾ ಎಂಬಲ್ಲಿರುವ ಗೌಡ ಸಮುದಾಯ ಭವನದಲ್ಲಿ ಸೆಪ್ಟಂಬರ್ 17ರಂದು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರಜೆಯಲ್ಲಿರುವ ಕಾರಣ ಅಪರ ಜಿಲ್ಲಾಧಿಕಾರಿಯವರು ಈ ಬಾರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.