ಉಜಿರೆ ಕಾಲೇಜಿನಲ್ಲಿ ಆಯುಷ್ಮಾನ್ ಕಾರ್ಡ್ ನೋಂದಾವಣೆ

 ಉಜಿರೆ ಕಾಲೇಜಿನಲ್ಲಿ ಆಯುಷ್ಮಾನ್ ಕಾರ್ಡ್ ನೋಂದಾವಣೆ
Share this post

ಉಜಿರೆ, ನ 08, 2022: ಶ್ರೀ ಧ. ಮಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಗ್ರಾಮ ಪಂಚಾಯತ್ ಉಜಿರೆ ಮತ್ತು ಎಸ್.ಕೆ. ಡಿ.ಆರ್.ಡಿ.ಪಿ ಧರ್ಮಸ್ಥಳ ಇದರ ಸಹಯೋಗದಲ್ಲಿ ಕೇಂದ್ರ ಸರ್ಕಾರ ಕೊಡ ಮಾಡುತ್ತಿರುವ ಆಯುಷ್ಮಾನ್ ಭಾರತ್ ಯೋಜನೆಯ ಆರೋಗ್ಯ ಕಾರ್ಡ್ (ಆಭಾ ಕಾರ್ಡ್) ನೋಂದಾವಣೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಆಯೋಜಿಸಿತ್ತು.

ಅತಿಥಿಯಾಗಿ ಆಗಮಿಸಿದ್ದ ಎಸ್.ಕೆ.ಡಿ.ಆರ್.ಡಿ.ಪಿ ಪ್ರತಿನಿಧಿ ಶ್ರೀಮತಿ ಶ್ರುತಿ ಗುಡಿಗಾರ್ ವಿದ್ಯಾರ್ಥಿಗಳಿಗೆ ಯೋಜನೆಯ ಉಪಯೋಗಗಳನ್ನು ತಿಳಿಸಿ , ನೋಂದಾವಣೆಗೆ ಚಾಲನೆ ಕೊಟ್ಟರು. ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಈ ಶಿಬಿರದ ಪ್ರಯೋಜನ ಪಡೆದುಕೊಂಡರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಧಿಕಾರಿಗಳಾದ ಡಾ. ಲಕ್ಷ್ಮೀನಾರಾಯಣ ಕೆ.ಎಸ್ ಹಾಗೂ ಶ್ರೀಮತಿ ದೀಪಾ ಆರ್. ಪಿ ಉಪಸ್ಥಿತರಿದ್ದರು. ಸ್ವಯಂಸೇವಕಿ ಅಂಜನಾ ಕೆ ರಾವ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!