ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕೆ: ಅರ್ಜಿ ಆಹ್ವಾನ

 ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕೆ: ಅರ್ಜಿ ಆಹ್ವಾನ
Share this post

ಮಂಗಳೂರು, ನ.22, 2022: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ 2021-22ನೇ ಸಾಲಿಗೆ ಸಿಇಟಿ ಮೂಲಕ ಆಯ್ಕೆಯಾಗಿ ಈಗಾಗಲೇ ವ್ಯಾಸಂಗ ಮುಂದುವರಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಎರಡನೇ ವರ್ಷದಿಂದ ಅರಿವು ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಅಥವಾ ಮಂಗಳೂರು ಒನ್ ಸೇವಾ ಕೇಂದ್ರದಲ್ಲಿ ಆನ್‍ಲೈನ್ 2022ನೇ ಡಿಸೆಂಬರ್ 31ರೊಳಗೆ ಅರ್ಜಿ ಸಲ್ಲಿಸಬೇಕು.  

ಹೆಚ್ಚಿನ ಮಾಹಿತಿಗೆ ನಿಗಮದ ದಕ್ಷಿಣ ಕನ್ನಡ ಜಿಲ್ಲಾ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ ಬಳಿ, ಊರ್ವ ಸ್ಟೋರ್ ಮಂಗಳೂರು. ದೂ.ಸಂಖ್ಯೆ 0824-2456544 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇವಾ ಸಿಂಧು ಪೋರ್ಟಲ್: https://sevasindhu.karnataka.gov.in/sevasindhu/english

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!