ಮೀನುಗಾರಿಕೆ ದೋಣಿಗಳು ದಡ ಸೇರಲು ಸೂಚನೆ
![ಮೀನುಗಾರಿಕೆ ದೋಣಿಗಳು ದಡ ಸೇರಲು ಸೂಚನೆ](https://thecanarapost.com/wp-content/uploads/2022/05/boat-fishing-b-850x560.jpg)
![](https://thecanarapost.com/wp-content/uploads/2022/05/boat-fishing-b.jpg)
ಮಂಗಳೂರು, ಡಿ.13, 2022: ಡಿ.16ರವರೆಗೆ ಮ್ಯಾಂಡಸ್ ಚಂಡಮಾರುತದಿಂದ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ.
ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟಲು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ಕೋಸ್ಟ್ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಎಚ್ಚರಿಸಿದ್ದಾರೆ.